ನಂದಿನಿ ಮೈಸೂರು
ಮೈಸೂರು :ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ರೈತರು ಸಂಕಷ್ಟದಲ್ಲಿರುವುದರಿಂದ ಈ ಬಾರಿ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಟ್ವೀಟ್ ಮಾಡಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ಸರಳವಾಗಿ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ ಹಂಚಿಕೊಂಡಿದ್ದು ಹೀಗೆ

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು,ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ನಮ್ಮ ಸರ್ಕಾರ ನಿರ್ಧರಿಸಿದೆ.
ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಭಾರಿ ಸರಳ ದಸರಾ ಆಚರಿಸಲಿದೆ ಎಂದಿದ್ದಾರೆ.